ಸ್ವಾತಂತ್ರ್ಯ ಸಂಗ್ರಾಮ ಮತ್ತು ವಿಭಜನೆ: ಈ ಅನುಭವಗಳಿಂದ ಭಾರತ ಕಲಿಯುವುದೇನಿದೆ?

By Lekha |

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಎಲ್ಲ ಹಿಂದೂ ಪರಮಾಧಿಕಾರವನ್ನು ಪ್ರತಿಪಾದಿಸುವ ಎಲ್ಲ ಬಣಗಳೂ ಸಹ ಭಾರತದ ಸ್ವಾತಂತ್ರ್ಯ ಸಂಗ್ರಾಮದಿಂದ ದೂರ ಉಳಿದಿದ್ದವು. ಬದಲಾಗಿ ಬ್ರಿಟೀಷರ ವಸಾಹತು ಆಳ್ವಿಕೆಯ ಒಡೆದು ಆಳುವ ನೀತಿಗೆ ಒತ್ತಾಸೆಯಾಗಿ, ಜನತೆಯ ಐಕ್ಯತೆಯನ್ನು ಭಂಗಗೊಳಿಸುವ ಹಿಂದೂ-ಮುಸ್ಲಿಂ ವಿಭಜನೆಯ ಪರವಾಗಿ ನಿಂತ್ತಿದ್ದವು. ಈ ಒಡೆದು ಆಳುವ ನೀತಿಯೇ ದೇಶದ ರಕ್ತಸಿಕ್ತ ವಿಭಜನೆಗೂ, ಭಾರತ ಮತ್ತು ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳ ಸ್ಥಾಪನೆಯೂ ಕಾರಣವಾಗಿತ್ತು. ನಂತರದಲ್ಲಿ ಬಾಂಗ್ಲಾದೇಶ ಪಾಕಿಸ್ತಾನದಿಂದ ಬೇರೆಯಾಗಿತ್ತು.

ನಮ್ಮ ಸ್ವಾತಂತ್ರ ಹೋರಾಟದಲ್ಲಿ ಕಮ್ಯುನಿಸ್ಟರ ಪಾತ್ರ

By ಸಿಪಿಐ-ಎಂಎಲ್ ಲಿಬರೇಶನ್ |

ಅರಿಂದಾಮ್ ಸೇನ್

(ಲಿಬರೇಷನ್ ಜುಲೈ 1997)

ಡಿ ಡಿ ಕೊಸಂಬಿರವರ 1946ರ ಲೇಖನ, ' ಭಾರತ ದಲ್ಲಿ ಬೂರ್ಜ್ವಾಗಳು ಒಂದು ಪ್ರಬುದ್ಧತೆಗೆ ಬಂದರು ' ಎಂಬುದರ ವಿಸ್ತ್ರಿತ ಭಾಗ. ಮುಂಬೈ ನಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸಭೆ ಸೇರಿದ್ದಾಗ ಅವರೆಲ್ಲರೂ ತಮ್ಮ ಬಂಧನ ನಿಶ್ಚಿತ ಎಂದು ತಿಳಿದಿದ್ದರು. ಅವರುಗಳು ಅದಕ್ಕೆ ತಯ್ಯಾರಿ ಯಾಗಿ, ತಮ್ಮ ಎಲ್ಲಾ ಕುಟುಂಬದ ವ್ಯವಹಾರ ಮತ್ತು ವೈಯಕ್ತಿಕ ಹಣ ಕಾಸಿನ ಸ್ಥಿತಿ ಯನ್ನು ಮುಂದಿನ ಒಂದು ಎರಡು ವರ್ಷಗಳಿಗೆ  ಎಲ್ಲಾ ರೀತಿಯ ಸಂದರ್ಭ ಗಳಿಗೆ ಸಿದ್ಧ ಪಡಿಸಿದ್ದರು.

ಚರಿತ್ರೆಯ ಪುನರಾವಲೋಕನ

By vksgautam |

- ವಿನೋದ್‌ ಮಿಶ್ರ

ಇತ್ತೀಚಿನ ದಿನಗಳಲ್ಲಿ ಅತಿ ಗಂಭೀರವಾಗಿ ಚರ್ಚೆಗೊಳಗಾಗುತ್ತಿರುವ ವಿಚಾರ ಎಂದರೆ ಕಾಮ್ರೇಡ್‌ ಚಾರು ಮಜೂಂದಾರ್‌ ಪ್ರತಿಪಾದಿಸಿದ “ ನಿರ್ಮೂಲನ ”ದ ಪ್ರಶ್ನೆ. ಇದರಲ್ಲಿ ಮಾರ್ಕ್ಸ್‌ವಾದದ ಅಂಶ ಇಲ್ಲ ಎಂತಲೂ, ಇದು ಕೇವಲ ವ್ಯಕ್ತಿಗತ ಭಯೋತ್ಪಾದನೆಯೆಂದೂ, ಇದರಿಂದ ಕೇವಲ ನಷ್ಟವೇ ಹೆಚ್ಚಾಗಿದೆ ಎಂದೂ ಹೇಳಲಾಗುತ್ತಿದೆ. ಇದೇ ವೇಳೆ ಸಾಮೂಹಿಕ ಹೋರಾಟ ಮತ್ತು ಸಶಸ್ತ್ರ ಹೋರಾಟವನ್ನು ಒಂದಾಗಿಸುವ ಪ್ರಸ್ತಾವನೆಗಳೂ ಬರುತ್ತಿದ್ದು, ಈ ಕಾರಣಕ್ಕಾಗಿಯೇ ʼನಿರ್ಮೂಲʼದ ಹಾದಿಯನ್ನು ಖಂಡಿಸಬೇಕು ಎಂದು ಹೇಳಲಾಗುತ್ತಿದೆ.

ಗೋಲ್ವಾಲ್‍ಕರ್ ಚಿಂತನೆಯ ಭಾರತ

By ಸಿಪಿಐ-ಎಂಎಲ್ ಲಿಬರೇಶನ್ |

2021ರ ಫೆಬ್ರವರಿ 19ರಂದು ಕೇಂದ್ರ ಸಂಸ್ಕøತಿ ಸಚಿವಾಲಯ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ರೀತಿಯ  ಸಂದೇಶವನ್ನು ನೀಡಿತ್ತು : “ ಮಹಾನ್ ಚಿಂತಕ, ವಿದ್ವಾಂಸ ಮತ್ತು ಮಹಾನ್ ನಾಯಕ ಎಮ್ ಎಸ್ ಗೋಲ್ವಾಲ್‍ಕರ್ ಅವರನ್ನು ಅವರ ಜನ್ಮದಿನದಂದು ಸ್ಮರಿಸಲಾಗುತ್ತಿದೆ. ಅವರ ಚಿಂತನೆಗಳು ಹಲವು ಪೀಳಿಗೆಗಳಿಗೆ ಸ್ಫೂರ್ತಿಯ ಸೆಲೆಯಾಗಿ ಮುಂದುವರೆಯಲಿದೆ ”. ಮೋದಿ ಮತ್ತು ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಆರೆಸ್ಸೆಸ್‍ನ ಸಂಸ್ಥಾಪಕ ಗೋಲ್ವಾಲ್‍ಕರ್ ಅವರ ಚಿಂತನೆ ಮತ್ತು ತತ್ವಗಳಿಂದ ಮಾರ್ಗದರ್ಶನ ಪಡೆಯುವುದು ಹೊಸ ವಿಚಾರವೇನಲ್ಲ. ಆದರೆ ಈ ಚಿಂತನೆಗಳಲ್ಲಿ ಯಾವುದೇ ವಿದ್ವತ್ ಆಗಲೀ, ಸ್ಫೂರ್ತಿಯ ಸೆಲೆಯಾಗಲೀ ಇಲ್ಲ ಎನ್ನುವುದೂ ಅಷ್ಟೇ ಸ್ಪಷ್ಟ.

ಫಾಸಿವಾದಿ ಧೋರಣೆ

By vksgautam |

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಮಾಡಲಾದ ಯೋಜಿತವಲ್ಲದ ಲಾಕ್‍ಡೌನ್‍ಗಳು ಮತ್ತು ನೀತಿಗಳಿಂದ ಭಾರತವು ಹಿಂದೆಂದೂ ಕಂಡರೀಯದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದರ ಒಟ್ಟಾರೆ ಪರಿಣಾಮದಿಂದಾಗಿ ಕೋಟಿಗಟ್ಟಲೆ ಜನರು ಕಡುಬಡತನಕ್ಕೆ ಜಾರಿದ್ದಾರೆ ಮತ್ತು ಬದುಕಲು ಹೆಣಗಾಡುತ್ತಿದ್ದಾರೆ - 84% ಕುಟುಂಬಗಳ ಆದಾಯವು 2021 ರಲ್ಲಿ ಕುಸಿದಿದೆ. ವಿಶ್ವಸಂಸ್ಥೆಯ ಪ್ರಕಾರ, ಜಾಗತಿಕವಾಗಿ ಸೃಷ್ಠಿಯಾಗಿರುವ ಹೊಸ ಬಡವರಲ್ಲಿ ಸುಮಾರು ಅರ್ಧದಷ್ಟು ಜನರು ಭಾರತದಲ್ಲಿದ್ದಾರೆ, ಇದೇ ಭಾರತದ ಸಾಧನೆ. ಅದೇ ಸಮಯದಲ್ಲಿ, ಶ್ರೀಮಂತರ ಮೇಲಿನ ತೆರಿಗೆಯನ್ನು ಮೋದಿ ಸರ್ಕಾರ ಕಡಿಮೆ ಮಾಡಿದ್ದರಿಂದ ಶ್ರೀಮಂತರು ಶ್ರೀಮಂತರಾಗಿದ್ದಾರೆ; ಸಂಪತ್ತು ತೆರಿಗೆಯನ್ನು ರದ್ದುಗೊಳಿಸಲಾಗಿದೆ ಮತ್ತು ಕಾಪೆರ್Çರೇಟ್ ತೆರಿಗೆಗಳನ್ನು 39% ರಿಂದ 22% ಕ್ಕೆ ಇಳಿಸಲಾಗಿದೆ.

ಬುಲ್ಡೋಜ್ ಮಾಡಲಾದ ನ್ಯಾಯ

By vksgautam |

ಪ್ರಕ್ಷುಬ್ಧಗೊಳಿಸುವಂತಹ ಘಟನೆಗಳನ್ನು ನಾವು ನೋಡುತ್ತಿದ್ದೇವೆ. ಭಾರತದಾದ್ಯಂತ ಹಿಂದೂ ಧಾರ್ಮಿಕ ಹಬ್ಬಗಳನ್ನು ನೆಪವಾಗಿಟ್ಟುಕೊಂಡು, ಆರ್‌ಎಸ್‌ಎಸ್ ಅಂಗಸಂಸ್ಥೆಗಳು ಮುಸ್ಲಿಂ ಪ್ರದೇಶಗಳ ಮೂಲಕ ಬೆದರಿಕೆಯ ಸಶಸ್ತ್ರ ಮೆರವಣಿಗೆಗಳನ್ನು ಆಯೋಜಿಸಿ, ಹಿಂದೂ ಪರಮಾಧಿಕಾರವನ್ನು ಒಪ್ಪಿಕೊಳ್ಳುವವರಿಗೆ ಮಾತ್ರ ಭಾರತದಲ್ಲಿ ಉಳಿಯಲು ಅವಕಾಶವಿದೆ ಎಂದು ಘೋಷಿಸುವ ಘೋಷಣೆಗಳನ್ನು ಕೂಗುತ್ತಿದ್ದಾರೆ. ಮೊದಲು ರಾಮ ನವಮಿಯಂದು, ಮತ್ತು ನಂತರ ಹನುಮ ಜಯಂತಿಯಂದು, RSS-ಸಂಯೋಜಿತ ಸಂಘಟನೆಗಳು ಮುಸ್ಲಿಮರನ್ನು ಅವಮಾನಿಸುವ, ಬೆದರಿಸುವ ಮತ್ತು ದಾಳಿ ಮಾಡುವ ಉದ್ದೇಶದಿಂದ ಮೆರವಣಿಗೆಗಳನ್ನು ನಡೆಸಿ, ಮಸೀದಿಗಳನ್ನು ಧ್ವಂಸಗೊಳಿಸಿದವು.