ಕಾಮ್ರೇಡ್ ವಿನೋದ್ ಮಿಶ್ರಾ ಅವರ 25ನೇ ಸಂಸ್ಮರಣಾ ದಿನ

By Lekha |

ಡಿಸೆಂಬರ್ 18, 2023ರ ಸಂಕಲ್ಪ

 

ಕಾಮ್ರೇಡ್ ವಿನೋದ್ ಮಿಶ್ರಾ ಅವರ 25ನೇ ಸಂಸ್ಮರಣಾ ದಿನದಂದು ಸಿಪಿಐ(ಎಂಎಲ್) ಪಕ್ಷವು ಮಹಾನ್ ಹುತಾತ್ಮರ ಮತ್ತು ಅಗಲಿದ ಮುಖಂಡರ ಕ್ರಾಂತಿಕಾರಿ ಧ್ಯೇಯಕ್ಕಾಗಿ ಪುನರಾರ್ಪಣೆ ಮಾಡಿಕೊಳ್ಳುತ್ತದೆ ಮತ್ತು ಇಂದಿನ ಕಠಿಣ ಪರಿಸ್ಥಿತಿಯಲ್ಲಿ ಕಾಮ್ರೇಡ್ ವಿಎಂ ಅವರ ಕ್ರಾಂತಿಕಾರಿ ಪರಂಪರೆಯನ್ನು ಮುಂದುವರೆಸಲು ಸಂಕಲ್ಪ ಮಾಡುತ್ತದೆ.

ಭತ್ತದ ಕಣಜದಿಂದ ಚೆಲ್ಲಿದ ರಕ್ತ

By CPIML (not verified) |

ಕೊಪ್ಪಳ ಜಿಲ್ಲೆಯಾದ್ಯಂತ ದಲಿತರ ಮೇಲಿನ ಈ ರೀತಿಯ ದೌರ್ಜನ್ಯ ಮತ್ತು ಹತ್ಯೆಗಳು ಪದೇಪದೇ ನಡೆಯುತ್ತಿವೆ. ಒಂದೆಡೆ ಜಾತಿಯೆಂಬುದಿಲ್ಲ, ಮೀಸಲಾತಿ ತೆಗೆಯಬೇಕು ಇತ್ಯಾದಿ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಜಾತಿ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿವೆ. ಸಾಂಕ್ರಾಮಿಕ ಕಾಲದಲ್ಲಿಯೂ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಲೇ ಇವೆ. ಪದೇ ಪದೇ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿ ವರದಿಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಂದು ಅಮಾನುಷ ಘಟನೆ ವರದಿಯಾಗಿದ್ದು, ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜೂನ್ 22 ರಾತ್ರಿ ಜರುಗಿದೆ.