ಜೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಮತ್ತು ಫಾತಿಮಾ ಶೇಖ್ ಅವರ ಕೊಡುಗೆಯನ್ನು ನಿರ್ನಾಮಗೊಳಿಸುತ್ತಿರುವ ಆರ್‍ಎಸ್‍ಎಸ್

By Lekha |

ಆರ್‍ಎಸ್‍ಎಸ್ ಮತ್ತು ಬಿಜೆಪಿಯ ಪ್ರಯೋಗ ಶಾಲೆಯಾಗಿರುವ ಕರಾವಳಿ ಕರ್ನಾಟಕದಲ್ಲಿ ಅವರೇ ಸೃಷ್ಠಿಸಿರುವ ಹಿಜಾಬ್ ವಿವಾದವನ್ನು ಕುರಿತು ಬರೆಯುವ ಮೊದಲು, ಮಹಿಳೆಯರು ಶಿಕ್ಷಣ ಪಡೆದುಕೊಳ್ಳುವಲ್ಲಿ ಕ್ರಾಂತಿಕಾರಿ ಹೋರಾಟ ನಡೆದ ಬಗ್ಗೆ ಚುಟುಕು ಇತಿಹಾಸವನ್ನು ಮೆಲಕು ಹಾಕಲು ಬಯಸುತ್ತೇನೆ. ದಲಿತರು, ಶೂದ್ರರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಶಿಕ್ಷಣ ಪಡೆಯುವುದು ಪಾಪವೆಂದು ಪರಿಗಣಿಸಿದ್ದ ಇತಿಹಾಸವಿರುವ ಈ ಸಮಾಜದಲ್ಲಿ, ಮೊದಲಿಗೆ, ಅವರೆಲ್ಲರಿಗೂ ಶಿಕ್ಷಣ ದೊರಕಬೇಕೆಂದು ಫುಲೆ ದಂಪತಿಗಳು ಮತ್ತು ಫಾತಿಮಾ ಶೇಖ್ ರವರು ಮಾಡಿದ ಕ್ರಾಂತಿಕಾರಿ ಹೋರಾಟದ ಫಲ ಅವರು ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು.

ಸ್ವಾತಂತ್ರ್ಯ ಸಂಗ್ರಾಮ ಮತ್ತು ವಿಭಜನೆ: ಈ ಅನುಭವಗಳಿಂದ ಭಾರತ ಕಲಿಯುವುದೇನಿದೆ?

By Lekha |

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಎಲ್ಲ ಹಿಂದೂ ಪರಮಾಧಿಕಾರವನ್ನು ಪ್ರತಿಪಾದಿಸುವ ಎಲ್ಲ ಬಣಗಳೂ ಸಹ ಭಾರತದ ಸ್ವಾತಂತ್ರ್ಯ ಸಂಗ್ರಾಮದಿಂದ ದೂರ ಉಳಿದಿದ್ದವು. ಬದಲಾಗಿ ಬ್ರಿಟೀಷರ ವಸಾಹತು ಆಳ್ವಿಕೆಯ ಒಡೆದು ಆಳುವ ನೀತಿಗೆ ಒತ್ತಾಸೆಯಾಗಿ, ಜನತೆಯ ಐಕ್ಯತೆಯನ್ನು ಭಂಗಗೊಳಿಸುವ ಹಿಂದೂ-ಮುಸ್ಲಿಂ ವಿಭಜನೆಯ ಪರವಾಗಿ ನಿಂತ್ತಿದ್ದವು. ಈ ಒಡೆದು ಆಳುವ ನೀತಿಯೇ ದೇಶದ ರಕ್ತಸಿಕ್ತ ವಿಭಜನೆಗೂ, ಭಾರತ ಮತ್ತು ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳ ಸ್ಥಾಪನೆಯೂ ಕಾರಣವಾಗಿತ್ತು. ನಂತರದಲ್ಲಿ ಬಾಂಗ್ಲಾದೇಶ ಪಾಕಿಸ್ತಾನದಿಂದ ಬೇರೆಯಾಗಿತ್ತು.

ಗೋಲ್ವಾಲ್‍ಕರ್ ಚಿಂತನೆಯ ಭಾರತ

By ಸಿಪಿಐ-ಎಂಎಲ್ ಲಿಬರೇಶನ್ |

2021ರ ಫೆಬ್ರವರಿ 19ರಂದು ಕೇಂದ್ರ ಸಂಸ್ಕøತಿ ಸಚಿವಾಲಯ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ರೀತಿಯ  ಸಂದೇಶವನ್ನು ನೀಡಿತ್ತು : “ ಮಹಾನ್ ಚಿಂತಕ, ವಿದ್ವಾಂಸ ಮತ್ತು ಮಹಾನ್ ನಾಯಕ ಎಮ್ ಎಸ್ ಗೋಲ್ವಾಲ್‍ಕರ್ ಅವರನ್ನು ಅವರ ಜನ್ಮದಿನದಂದು ಸ್ಮರಿಸಲಾಗುತ್ತಿದೆ. ಅವರ ಚಿಂತನೆಗಳು ಹಲವು ಪೀಳಿಗೆಗಳಿಗೆ ಸ್ಫೂರ್ತಿಯ ಸೆಲೆಯಾಗಿ ಮುಂದುವರೆಯಲಿದೆ ”. ಮೋದಿ ಮತ್ತು ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಆರೆಸ್ಸೆಸ್‍ನ ಸಂಸ್ಥಾಪಕ ಗೋಲ್ವಾಲ್‍ಕರ್ ಅವರ ಚಿಂತನೆ ಮತ್ತು ತತ್ವಗಳಿಂದ ಮಾರ್ಗದರ್ಶನ ಪಡೆಯುವುದು ಹೊಸ ವಿಚಾರವೇನಲ್ಲ. ಆದರೆ ಈ ಚಿಂತನೆಗಳಲ್ಲಿ ಯಾವುದೇ ವಿದ್ವತ್ ಆಗಲೀ, ಸ್ಫೂರ್ತಿಯ ಸೆಲೆಯಾಗಲೀ ಇಲ್ಲ ಎನ್ನುವುದೂ ಅಷ್ಟೇ ಸ್ಪಷ್ಟ.