ಕಾರ್ಪೋರೇಟ್ ಹಿಂದುತ್ವ ಕಾರ್ಯಸೂಚಿಗೆ ಪರ್ಯಾಯ ಬೇಕಿದೆ

By Lekha |

- ನಾ ದಿವಾಕರ

ಕರ್ನಾಟಕದ ಅಧಿಕಾರ ರಾಜಕಾರಣದ ವಲಯದಲ್ಲಿ ನಡೆದ ಹಸ್ತಾಂತರದ ಪ್ರಹಸನ ಇಡೀ ರಾಜ್ಯದ ಗಮನ ಸೆಳೆಯಲು ಕಾರಣವಾಗಿದ್ದು, ರಾಜ್ಯದ ಸಾಮಾಜಿಕಾರ್ಥಿಕ ಸ್ಥಿತ್ಯಂತರಗಳಲ್ಲ. ಬದಲಾಗಿ ಜಾತಿ ರಾಜಕಾರಣದ ಏಳುಬೀಳುಗಳು. ರಾಜ್ಯದಲ್ಲಿ ಇಂದು ಜಾತಿವಾದ ಎನ್ನುವುದು ಒಪ್ಪಿತ ರಾಜಕೀಯ ಸಂಸ್ಕೃತಿಯಾಗಿದ್ದು, ಜಾತಿ ಸಮೀಕರಣದಿಂದಾಚೆಗಿನ ಯಾವುದೇ ಸಂಕಥನಗಳು ನಗಣ್ಯ ಎನಿಸುತ್ತದೆ. ಯಡಿಯೂರಪ್ಪ ಸರ್ಕಾರದ ಪತನ ಈ ನಿಟ್ಟಿನಲ್ಲಿ ಸ್ಪಷ್ಟ ಉದಾಹರಣೆಯಾಗಿ ಕಾಣುತ್ತದೆ. ಲಿಂಗಾಯತ ಸಮುದಾಯದ ರಾಜಕೀಯ ಪ್ರಾಬಲ್ಯ ಮತ್ತು ಈ ಸಮುದಾಯವನ್ನು ಪ್ರತಿನಿಧಿಸುವ  ‘ ಜನಪ್ರತಿನಿಧಿಗಳ ’ ಅಧಿಕಾರ ದಾಹ ಈ ರಾಜ್ಯದ ರಾಜಕೀಯ ವಿದ್ಯಮಾನಗಳನ್ನು ನಿಯಂತ್ರಿಸುತ್ತದೆ. ಬಸವರಾಜ ಬೊಮ್ಮಾಯಿ ಅವರ ಆಯ್ಕೆಯಲ್ಲಿ ಇದು ಸ್ಪಷ್ಟವಾಗಿ ಕಾಣುತ್ತದೆ. 

ಜನಸಾಮಾನ್ಯರ ಮೇಲೆ ನಡೆಯುತ್ತಿರುವ ಫ್ಯಾಸಿಸ್ಟ್ ಕಾರ್ಪೋರೇಟ್ ಪ್ರಹಾರ

By Lekha |

ಭಾರತದ 71ನೆಯ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೇಶದ ರೈತಾಪಿ ಮತ್ತು ಸಾಮಾನ್ಯ ಜನತೆ ತಮ್ಮ ಅಭೂತಪೂರ್ವ ಚಳುವಳಿಯ ಮೂಲಕ ಗಣತಂತ್ರ ವ್ಯವಸ್ಥೆಯ ಸ್ಫೂರ್ತಿಯನ್ನು ಪ್ರದರ್ಶಿಸಿದ್ದೇ ಅಲ್ಲದೆ, ಸಾರ್ವಭೌಮ ಪ್ರಜೆಗಳ ಪ್ರತಿರೋಧದ ದನಿ ಹಾಗೂ ಐಕ್ಯತೆಯನ್ನು ಪ್ರದರ್ಶಿಸಿದ್ದರು.